ನೀರು ನುಗ್ಗಿ ಸಾವಿರಾರು ರೂ ಮೌಲ್ಯದ ದವಸ ಧಾನ್ಯಗಳನ್ನು ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳು ಪುಸ್ತಕಗಳನ್ನು ಕಳೆದುಕೊಂಡು ಹೈರಾಣಾಗಿದ್ದಾರೆ. ಮಳೆ ನಿಂತು ಹೋದ ಮೇಲೆ ಈ ಗ್ರಾಮ ಜನರ ಬದುಕು ಬೀದಿಗೆ ಬಿದ್ದಿದೆ. ಮಹಾಮಳೆಯಿಂದ ದವಸ, ಧಾನ್ಯಗಳನ್ನು, ರೈತರು ಬೆಳೆದ ಬೆಳೆ ದನಕರುಗಳು ಕುರಿ ಮೇಕೆಗಳನ್ನು ಸೇರಿದಂತೆ ಎಲ್ಲವನ್ನು ಗ್ರಾಮಸ್ಥರು ಕಳೆದುಕೊಂಡಿದ್ದಾರೆ.
ರಾಜಕಾರಣಿಗಳಿಗೆ ಬೇಕಿರುವುದು ಜನರ ಮತ ಹೊರತು ಜನರ ಹಿತವಲ್ಲ